ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿರುವ ಬಿಜೆಪಿ ನಾಯಕರು ಪಶ್ಚಾತ್ತಾಪ ಪಡುವ ಪರಿಸ್ಥಿತಿ ಬರಲಿದೆ:ಎಂ.ಬಿ ಪಾಟೀಲ್

ಮುಡಾ ಪ್ರಕರಣದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪಗಳನ್ನು ಮಾಡಿರುವ ಬಿಜೆಪಿ ನಾಯಕರು ಸದ್ಯದಲ್ಲೇ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಬರಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.


ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂದು ಕೆಲ ಬಿಜೆಪಿ ನಾಯಕರೇ ಹೇಳಿದ್ದಾರೆ. ಹೀಗಾಗಿ ಬಿಜೆಪಿ ನಾಯಕರಿಗೆ ಮುಂದೆ ತಮ್ಮ ತಪ್ಪಿನ ಅರಿವಾಗಲಿದೆ ಎಂದರು.

ಮುಡಾದಿಂದಲೇ ತಪ್ಪಾಗಿದೆ ಎಂದ ಅವರು ಭೂ ಸ್ವಾಧೀನ ಮತ್ತು ಸ್ವಾಧೀನ ಪಡಿಸಿಕೊಂಡ ಭೂಮಿಗೆ ಪರಿಹಾರ ಕೊಡುವ ವಿಷಯದಲ್ಲಿ ಮುಡಾ ತಪ್ಪು ಮಾಡಿದೆ. ಆಗ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರದಲ್ಲಿತ್ತು. ಈ ಪ್ರಕರಣದಲ್ಲಿ ಮುಡಾ ವಿರುದ್ಧವೇ ಕ್ರಮವಾಗಬೇಕು ಎಂದು ಪಾಟೀಲ್‌ ಹೇಳಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ ಎಂದ ಅವರು ಮೂಡಾ ಪ್ರಕರಣದ ಆರೋಪದ ಬಳಿಕ ಸಿದ್ದರಾಮಯ್ಯ ಮತ್ತಷ್ಟು ಬಲಿಷ್ಟವಾಗಿ ಹೊರಹೊಮ್ಮಲಿದ್ದಾರೆ ಎಂದು ಪಾಟೀಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!