ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ
ಪುತ್ತೂರು: ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ಪೆರುವಾಯಿ ಅವರಿಗೆ ರಾಯಚೂರು ಕಲಾ ಸಂಕುಲ ಸಂಸ್ಥೆ(ರಿ.) ವತಿಯಿಂದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸೆ.8ರಂದು ರಾಯಚೂರು ನಗರದ ಸ್ಟೇಶನ್ ರಸ್ತೆಯಲ್ಲಿರುವ ರಂಗಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಫಿಸಾ ಪೆರುವಾಯಿ ಅವರು ಈ ಹಿಂದೆ ಪೆರುವಾಯಿ ಗ್ರಾ.ಪಂ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಗ್ರಾ.ಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ವಾಹನದ ಚಾಲಕಿಯಾಗಿ ಕಾರ್ಯ ನಿರ್ವಹಿಸಿ ಸುದ್ದಿಯಾಗಿದ್ದರು. ಸ್ವಚ್ಚತೆಗೆ ವಿಶೇಷ ಆದ್ಯತೆ ನೀಡಿರುವ ಕಾರಣಕ್ಕೆ ಆಗಿನ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಂದ ಅಭಿನಂದನೆ ಸ್ವೀಕರಿಸಿದ್ದರು. ಮೊನ್ನೆ ಆ.15ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ದ.ಕ ಜಿಲ್ಲೆಯಿಂದ ವಿಶೇಷ ಅತಿಥಿಯಾಗಿ ಆಹ್ವಾನಿಸಲ್ಪಟ್ಟು ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.