ಕರಾವಳಿರಾಜಕೀಯ

ಅರುಣ್ ಕುಮಾರ್ ಪುತ್ತಿಲ ವಿರುದ್ದ ದಾಖಲಾದ ಪ್ರಕರಣ ಹಾಗೂ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ದ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್.ಐ.ಆ‌ರ್. ಮತ್ತು ನ್ಯಾಯಾಲಯದ ಮುಂದಿನ ತನಿಖಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಅರುಣ್ ಕುಮಾ‌ರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ನೀಡಿದ್ದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರುಣ್ ಪುತ್ತಿಲ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪಿ. ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಇದು ಸುಳ್ಳು ಆರೋಪವಾಗಿದ್ದು ಈ ಬಗ್ಗೆ ದಾಖಲಾಗಿರುವ ಎಫ್.ಐ.ಆ‌ರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ನ್ಯಾಯಪೀಠದ ಗಮನ ಸೆಳೆದಿದ್ದರು.

ವಾದ ಪುರಸ್ಕರಿಸಿದ ನ್ಯಾಯಮೂರ್ತಿಗಳು ಎಫ್.ಐ.ಆ‌ರ್. ಮತ್ತು ಮುಂದಿನ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!