ರಾಜಕೀಯರಾಜ್ಯ

ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ, ಸಿದ್ದರಾಮಯ್ಯ ಸ್ಪಷ್ಟನೆ



ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ. ಯಾರೂ ಹೇಳಿಕೆ ಕೊಟ್ಟಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಹುದ್ದೆ ಖಾಲಿಯಾದಾಗ ನಾವು ಬರುತ್ತೇವೆ ಎಂದಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ರಾಜ್ಯ ರಾಜಕೀಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 11: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಕೂಗು ಜೋರಾಗಿದೆ. ಪ್ರತಿಯೊಬ್ಬರು ಅವಕಾಶ ಸಿಕ್ಕರೇ ನಾನು ಸಿಎಂ ಆಗುತ್ತೆ ಎನ್ನುತ್ತಿದ್ದಾರೆ. ಇದೆಲ್ಲದರ ನಡುವೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ “ಸಿಎಂ ಕುರ್ಚಿ ಖಾಲಿ ಇಲ್ಲ ನಾನೇ ಮುಂದುವರಿಯುತ್ತೇನೆ” ಎಂದು ಸ್ಪಷ್ಟನೆ ನೀಡಿದ್ದಾರೆ. ಯಾರೂ ಹೇಳಿಕೆ ಕೊಟ್ಟಿಲ್ಲ. ಸಿಎಂ ಹುದ್ದೆ ಖಾಲಿಯಾದಾಗ ನಾವು ಬರುತ್ತೇವೆ ಎಂದಿದ್ದಾರೆ. ಯಾವುದೇ ಡೌಟು ಇಲ್ಲ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!