ದ.ಕ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಭೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಸಿಕ ಸಭೆಯು ಬಂಟ್ವಾಳ ಡಿವೈಎಸ್ಪಿ ಕಚೇರಿಯಲ್ಲಿ ಜಿಲ್ಲಾ ಎಸ್ಪಿ ಯತೀಶ್ ಎನ್ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ನಡೆಯಿತು.

ಸಭೆಯಲ್ಲಿ ದ.ಕ ಎಡಿಶನಲ್ ಎಸ್ಪಿ ರಾಜೇಂದ್ರ ಡಿ ಎಸ್, ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಎಸ್, ಪುತ್ತೂರು ಎಎಸ್ಪಿ ಅರುಣ್ ನಾಗೇಗೌಡ, ಜಾರಿ ನಿರ್ದೇಶನಾಲಯದ ಪೊಲೀಸ್ ನಿರೀಕ್ಷಕರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಮುಖರು ಭಾಗವಹಿಸಿದ್ದರು.





