ಕರಾವಳಿಕ್ರೈಂ

ಸುಳ್ಯ: ಕಂಟೈನರ್-ಸ್ಕೂಟಿ ಅಪಘಾತ, ಯುವಕ ಗಂಭೀರ



ಸುಳ್ಯ: ಕಂಟೈನರ್ ಲಾರಿ ಮತ್ತು ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕದಲ್ಲಿ ನಡೆದಿದೆ.

ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಹಾಗೂ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕಾಸರಗೋಡು ಮೂಲದ ಮಹಮ್ಮದ್ ಝಮೀರ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಸ್ಕೂಟಿ ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!