ಬೆಳ್ತಂಗಡಿ: ಅಕ್ರಮ ಜಾನುವಾರು ಸಾಗಾಟ, ನಾಲ್ಕು ಮಂದಿ ವಶಕ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಲವಂತಿಕೆ ಗ್ರಾಮದ ಏಳನೀರು ಹೋಗುವ ರಸ್ತೆಯ ಮುಖಾಂತರ 5 ಜಾನುವಾರುಗಳನ್ನು ಯಾವುದೇ ಪರವಾನಗೆ ಇಲ್ಲದೇ ಎರಡು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಅ.3 ರಂದು ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ಸೈ ಮುರಳಿಧರ ನಾಯ್ಕ ಕೆ ಜಿ ಮತ್ತು ಸಿಬ್ಬಂದಿಗಳು ಬೆಳ್ತಂಗಡಿ ತಾಲೂಕು ಮಲವಂತಿಕೆ ಗ್ರಾಮದ ಕಜಕ್ಕೆ ಎಂಬಲ್ಲಿಗೆ ತೆರಳಿ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಒಂದು ಪಿಕಪ್ ವಾಹನದಲ್ಲಿ 3 ಜಾನುವಾರು ಮತ್ತು ಇನ್ನೊಂದು ಪಿಕಪ್ ವಾಹನದಲ್ಲಿ 2 ಜಾನುವಾರುಗಳು ಹಿಂಸಾತ್ಮಕವಾಗಿ ತುಂಬಿರುವುದು ಕಂಡು ಬಂದಿದೆ.

ಈ ಬಗ್ಗೆ ವಾಹನದಲ್ಲಿದ್ದವರನ್ನು ವಿಚಾರಿಸಿದಾಗ ಅವರು ಯಾವುದೇ ಪರವಾನಿಗೆ ಇಲ್ಲದೇ ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.
ಈ ಬಗ್ಗೆ ಮುಂದಿನ ಕಾನೂನು ಕ್ರಮಕ್ಕಾಗಿ 2 ಪಿಕಪ್ ವಾಹನಗಳನ್ನು ಹಾಗೂ 5 ಜಾನುವಾರುಗಳನ್ನು ಮತ್ತು ಆರೋಪಿಗಳಾದ ಚಿಬಿದ್ರೆ ಗ್ರಾಮದ ಯತೀಂದ್ರ (24) ಚಾರ್ಮಾಡಿ ಗ್ರಾಮದ ಉಸ್ಮಾನ್ (36) ತೊಟತ್ತಾಡಿ ಗ್ರಾಮದ ಅರವಿಂದ (30) ಹಾಗೂ ಚಿಬಿದ್ರೆ ಗ್ರಾಮದ ಆರೀಫ್ (27) ಎಂಬವರನ್ನು ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 84/2024 ಕಲಂ 5,7,12 ಕರ್ನಾಟಕ ಜಾನುವಾರು ಪ್ರತಿಬಂಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಆದ್ಯಾದೇಶ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸೆ ತಡೆಕಾಯಿದೆ 1960 ರಂತೆ ಪ್ರಕರಣ ದಾಖಲಾಗಿದೆ.