ಕರಾವಳಿ

ನಾಪತ್ತೆಯಾಗುವ ಮುನ್ನ ವಾಯ್ಸ್ ಮೆಸೇಜ್ ಕಳುಹಿಸಿದ್ದ ಮಮ್ತಾಜ್ ಅಲಿ?

ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ನಾಪತ್ತೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎನ್ನುವ ಸಂಶಯ ಹೆಚ್ಚಿದೆ.

ಇಂದು ನಸುಕಿನ ಜಾವ ಮೂರು ಗಂಟೆ ವೇಳೆಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟಿದ್ದು ಈ ವೇಳೆ ತಮ್ಮ ಫ್ಯಾಮಿಲಿ ಗ್ರೂಪಿನಲ್ಲಿ ವಾಯ್ಸ್ ಮೆಸೇಜ್ ಹಾಕಿದ್ದರು ಎನ್ನಲಾಗಿದೆ.

ವಾಯ್ಸ್ ಆಲಿಸಿದ ಕೂಡಲೇ ತಂದೆಯವರನ್ನು ಹುಡುಕಲು ಮನೆಯವರೊಂದಿಗೆ ಕಾರಿನಲ್ಲಿ ಹೊರಟೆವು. ಕೂಳೂರು ಬ್ರಿಡ್ಜ್ ತಲುಪಿದಾಗ ಅಲ್ಲಿ ತಂದೆಯವರ ಕಾರು ಪತ್ತೆಯಾಗಿದ್ದು, ಮುಂಭಾಗ ನುಜ್ಜುಗುಜ್ಜಾಗಿತ್ತು ಎಂದು ಮಮ್ತಾಜ್ ಅಲಿ ಅವರ ಪುತ್ರಿ ನೀಡಿರುವ ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.

ಈ ಎಲ್ಲಾ ವಿಚಾರಗಳನ್ನು ಗಮನಿಸುವಾಗ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ಬಲವಾಗಿ ವ್ಯಕ್ತವಾಗಿದೆ. ಇನ್ನೊಂದು ಮಾಹಿತಿ ಪ್ರಕಾರ ಮಮ್ತಾಜ್ ಅಲಿ ಉದ್ಯಮದಲ್ಲಿ ನಷ್ಟ ಅನುಭವಿಸಿದ್ದರು ಎಂದೂ ಹೇಳಲಾಗುತ್ತಿದೆ. ಆದರೆ ಯಾವುದೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!