ಕರಾವಳಿ

ಮುಮ್ತಾಜ್ ಅಲಿ ನಿಗೂಢ ಸಾವು ಪ್ರಕರಣ: ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಹೇಳಿದ್ದೇನು?



ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಅಲಿ ಸಾವಿನ ಪ್ರಕರಣದಲ್ಲಿ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ತಿಳಿಸಿದ್ದಾರೆ.

ಮುಮ್ತಾಝ್‌ ಅಲಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಕುಟುಂಬಸ್ಥರು ಕಾವೂರು ಠಾಣೆಗೆ ಬ್ಲಾಕ್ ಮೇಲ್ ಬಗ್ಗೆ ದೂರು ನೀಡಿದ್ದರು. ಹನಿಟ್ರ್ಯಾಪ್ ರೀತಿಯಲ್ಲಿ ಆರು ಜನರ ಮೇಲೆ ಅವರು ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಮುಮ್ತಾಝ್‌ ಅಲಿಯವರು 50 ಲಕ್ಷ ಹಣ ಕೊಟ್ಟಿದ್ದರು, ಹಾಗೆಯೇ 25 ಲಕ್ಷ ಚೆಕ್ ಮೂಲಕ ನೀಡಿದ್ದರು. ವಾಯ್ಸ್ ಕ್ಲಿಪ್ಪಿಂಗ್ ನಲ್ಲಿ ಮುಮ್ತಾಝ್‌ ಅಲಿ, ಕೆಲವರ ಹೆಸರು ಹೇಳಿದ್ದಾರೆ. ಆರೋಪಿ ಸತ್ತಾರ್ ಹೆಸರು ವಾಯ್ಸ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ಎ1 ಆರೋಪಿ ಮಹಿಳೆ ರೆಹಮತ್ ಸಂಬಂಧಿ ಅಲ್ಲ, ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!