ಕರಾವಳಿರಾಜಕೀಯ

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ, ಸಹ ಸಂಚಾಲಕರ ನೇಮಕ



ಉಡುಪಿ–ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ, ಸಹ ಸಂಚಾಲಕರನ್ನು ನೇಮಕಗೊಳಿಸಿದೆ.

ನಿತೀಶ್ ಕುಮಾರ್ ಹಾಗೂ ಸಂತೋಷ್ ಕುಮಾರ್


ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ನಿಕಟಪೂರ್ವ ಪ್ರ.ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಹಾಗೂ ಸಹ ಸಂಚಾಲಕರಾಗಿ ನಗರ ಮಂಡಲ ಉಪಾಧ್ಯಕ್ಷರಾಗಿರುವ ಸಂತೋಷ್ ಕುಮಾರ್ ಕೈಕಾರ ಅವರನ್ನು ಜಿಲ್ಲಾ ಬಿಜೆಪಿ ನಿಯುಕ್ತಿಗೊಳಿಸಿದೆ.
ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರಿಗೆ ಮತದಾನ ಮಾಡುವ ಅವಕಾಶ ಇರುತ್ತದೆ. ಬಿಜೆಪಿ ಅಭ್ಯರ್ಥಿಯಾಗಿ ಪುತ್ತೂರು ಬೊಟ್ಯಾಡಿಯ ಕಿಶೋರ್ ಕುಮಾರ್ ಕಣದಲ್ಲಿದ್ದಾರೆ. ಅ.21 ರಂದು ಚುನಾವಣೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!