ಕರಾವಳಿಕ್ರೈಂ

ಮಾದಕವಸ್ತು ಸೇವಿಸಿ ಅನುಚಿತ ವರ್ತನೆ, ಓರ್ವ ಪೊಲೀಸ್ ವಶಕ್ಕೆ



ಪುತ್ತೂರು : ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಇರ್ದೆ ದೂಮಡ್ಕ ನಿವಾಸಿ ಮೆಹಬೂಬ್ ಬಂಧಿತ ವ್ಯಕ್ತಿ.

ಅ.8 ರಂದು ಹಳೆ ನಿರಾಳ ಬಾರ್ ನ ಹಿಂದುಗಡೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ್ದು, ಆ ವೇಳೆ ವ್ಯಕ್ತಿಯು ಓಡಿ ಹೋಗಲು ಪ್ರಯತ್ನಿಸಿದ್ದು, ಸಿಬ್ಬಂದಿಗಳ ಸಹಾಯದಿಂದ ವಶಕ್ಕೆ ಪಡೆದು ವಿಚಾರಿಸಿದಾಗ ಆತನು ಯಾವುದೋ ಮಾದಕ ವಸ್ತುವನ್ನು ಸೇವಿಸಿದವನಂತೆ ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ಮಾದಕವಸ್ತುವನ್ನು ಸೇವಿಸಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!