ರಾಜ್ಯ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಶಿಗ್ಗಾವಿ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅ.19ರಂದು ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ.

ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಅವರಿಗೆ ಟಿಕೆಟ್ ನೀಡಿದೆ.

ಸಂಡೂರು ಎಸ್ ಟಿ ಮೀಸಲು ಕ್ಷೇತ್ರಕ್ಕೆ ಬಂಗಾರು ಹನುಮಂತು ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯ ಘೋಷಣೆ ಬಿಜೆಪಿ ಮಾಡಿಲ್ಲ, ಹೀಗಾಗಿ ಮೈತ್ರಿ ವಿಚಾರದಲ್ಲಿ ಕಗ್ಗಂಟಾಗಿರುವ ಕಾರಣ ಈ ಕ್ಷೇತ್ರ ಭಾರೀ ಕುತೂಹಲ ಕಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!