ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ.

ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು, ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜೆಡಿಎಸ್ ಕ್ಷೇತ್ರವನ್ನು ಬಿಟ್ಟು ಕೊಡದಿರಲು ನಿರ್ಧರಿಸಿದೆ. ಅಲ್ಲದೇ ಹೈಕಮಾಂಡ್ ಕೂಡ ಸಿಪಿ ಯೋಗೇಶ್ವರ್ ಗೆ ಟಿಕೆಟ್ ನೀಡಿಲ್ಲ. ಅವರು ಇದೀಗ ಬಿಜೆಪಿಯ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.