ಕನ್ನಡ ಮಾಣಿಕ್ಯ ಪ್ರಶಸ್ತಿಗೆ ಗಡಿನಾಡ ಧ್ವನಿ ಪತ್ರಿಕೆಯ ಸಂಪಾದಕ ಡಾ. ಹಾಜಿ ಎಸ್ ಅಬೂಬಕರ್ ಆರ್ಲಪದವು ಆಯ್ಕೆ
ಬೆಂಗಳೂರಿನ ಪ್ರತಿಷ್ಠಿತ ರಂಗಭೂಮಿ ಸಂಸ್ಥೆ ಗೆಜ್ಜೆ ಹೆಜ್ಜೆ ರಂಗ ತಂಡದ ಆಶ್ರಯದಲ್ಲಿ , ಕನ್ನಡದ ಕೈಂಕರ್ಯವನ್ನು ಮಾಡುತ್ತಿರುವ ಸಾಧಕರಿಗೆ ನೀಡಲ್ಪಡುವ ಕನ್ನಡ ಮಾಣಿಕ್ಯ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈಯುತ್ತಿರುವ ಗಡಿನಾಡ ಸಂಘಟಕ ಡಾ.ಹಾಜಿ.ಯಸ್ ಅಬೂಬಕ್ಕರ್ ಆರ್ಲಪದವು ಇವರನ್ನು ಆಯ್ಕೆಮಾಡಲಾಗಿದೆ.
![](http://newsbites.in/wp-content/uploads/2022/09/IMG-20220918-WA0074-273x300.jpg)
ಇವರು ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ, ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತ ಸಮಿತಿ ಸದಸ್ಯರಾಗಿ,ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾಗಿ , ಸಿಎಸ್ ಸಿ ವಿಎಲ್ಇ ಸೊಸೈಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ,ಪುತ್ತೂರು ಸೀರತ್ ಕಮಿಟಿ ಕಾರ್ಯದರ್ಶಿಯಾಗಿ,ಶಿಕ್ಷಣ ಸಂಪನ್ಮೂಲ ಕೇಂದ್ರ ತಾಲೂಕು ಉಪಾಧ್ಯಕ್ಷ ,ಗಡಿನಾಡ ಧ್ವನಿ ಪತ್ರಿಕೆ ಸಂಪಾದಕರಾಗಿ, ಗಡಿನಾಡ ಸಮ್ಮೇಳನದ ರೂವಾರಿಯಾಗಿ ಅಲ್ಲದೆ ಹಲವಾರು ಸಂಘ ಸಂಸ್ಥೆಗಳ ಸಾರಥಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.