ಗೃಹಲಕ್ಷ್ಮಿ ಯೋಜನೆ ಹಣದಿಂದ ಹೊಲಿಗೆ ಯಂತ್ರ ಖರೀದಿಸಿದ ಮಹಿಳೆ!
ಬೆಂಗಳೂರು: ಮಹಿಳೆಯೊಬ್ಬರು ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ತನ್ನ ನಾಲ್ವರು ಹೆಣ್ಣು ಮಕ್ಕಳ ಉದ್ಯೋಗಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ನಿವಾಸಿ ಗಂಗವ್ವ ಬಿರಾದಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ 12 ತಿಂಗಳ ರೂ. 24,000 ಹಣ ಕೂಡಿಟ್ಟು ಹೊಲಿಗೆ ಯಂತ್ರ ಖರೀದಿಸಿ, ತನ್ನ ಹೆಣ್ಣುಮಕ್ಕಳಿಗೆ ಹೊಲಿಗೆ ತರಬೇತಿ ನೀಡುವ ಮೂಲಕ ಬದುಕು ರೂಪಿಸಿದ್ದಾರೆ. ಇದು ಭಾರೀ ಮೆಚ್ಚುಗೆಗೂ ಪಾತ್ರವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಹೆಣ್ಣು ಮಕ್ಕಳಿಗೆ ನೆರವಾಗುವುದೇ ನಮ್ಮ ಯೋಜನೆಯ ಉದ್ದೇಶ ಆಗಿದೆ ಎಂದಿದ್ದಾರೆ.