ಬೆಳ್ತಂಗಡಿ: ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ಯುವಕರು ನೀರು ಪಾಲು
ಬೆಳ್ತಂಗಡಿ: ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನ.27ರಂದು ಸಂಜೆ ನಡೆದಿದೆ.
ಮೃತ ಯುವಕರನ್ನು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂದು ಗುರುತಿಸಲಾಗಿದೆ.
ವೇಣೂರು ಚರ್ಚ್ ನ ಕಾರ್ಯಕ್ರಮದ ಹಿನ್ನಲೆಯಲ್ಲಿ ಇವರು ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದ್ದು, ಬಳಿಕ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು. ನದಿ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.