ಕರಾವಳಿಜಿಲ್ಲೆ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಹಿನ್ನೆಲೆ-ಸರ್ವೆ ವಲಯ ಕಾಂಗ್ರೆಸ್ ಸಮಾಲೋಚನಾ ಸಭೆ

ಪುತ್ತೂರು: ಕನ್ಯಾಕುಮಾರಿಯಿಂದ ಪ್ರಾರಂಭಗೊಂಡು ಕಾಶ್ಮೀರದ ತನಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ದಿನಾಂಕ 30 ರಂದು ಕರ್ನಾಟಕ ಪ್ರವೇಶಿಸಲಿದ್ದು ಆ ಪ್ರಯುಕ್ತ ಸರ್ವೆ ವಲಯ ಕಾಂಗ್ರೆಸ್ ಸಮಾಲೋಚನಾ ಸಭೆ ಕಲ್ಪಣೆ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ಸೆ.23ರಂದು ನಡೆಯಿತು.


ಸಭೆಯಲ್ಲಿ ಭಾರತ್ ಜೋಡೋ ಯಾತ್ರೆಯ ಕೆ.ಪಿ.ಸಿ.ಸಿ ಉಸ್ತುವಾರಿಗಳಾದ ದಿವ್ಯಪ್ರಭಾ ಚೆಲ್ತಡ್ಕ, ಬ್ಲಾಕ್ ಉಪಾಧ್ಯಕ್ಷರಾದ ಮೌರಿಸ್ ಮಸ್ಕರೇನಸ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಭಟ್ ಯಾತ್ರೆಯ ಬಗ್ಗೆ ಮಾಹಿತಿ ನೀಡಿದರು.


ಬ್ಲಾಕ್ ಕಾಂಗ್ರೆಸ್ ಸದಸ್ಯ ರಾಮಚಂದ್ರ ಸೊರಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಸಭೆಯಲ್ಲಿ ಬೂತ್ ಅಧ್ಯಕ್ಷ ಮಜೀದ್ ಬಾಳಾಯ, ಯತೀಶ್ ರೈ ಮೇಗಿನಗುತ್ತು, ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್ ಹಾಗು ಪಕ್ಷದ ನಾಯಕರಾದ ಗೀತಾ ಮರಿಯ, ಶಶಿಧರ್ ಎಸ್.ಡಿ, ರಹೀಂ ರೆಂಜಲಾಡಿ, ಸಂಜೀವ ನಾಯ್ಕ, ಝೈನುದ್ದೀನ್ ಹಾಜಿ, ಅಝೀಝ್ ರೆಂಜಲಾಡಿ, ಹನೀಫ್ ಕಲ್ಪಣೆ, ಕೊರಗಪ್ಪ ಸೊರಕೆ, ಜಾನಕಿ ಮುಂತಾದವರು ಉಪಸ್ಥಿತರಿದ್ದರು.
ಬ್ಲಾಕ್ ಯುವ ಪ್ರಧಾನ ಕಾರ್ಯದರ್ಶಿ ಕಮಲೇಶ್ ಎಸ್.ಡಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!