ವಗ್ಗ ಸಮೀಪ ಬಸ್-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸಾವು
ಬೆಳ್ತಂಗಡಿ: ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ನಡುವೆ ಡಿ.5ರಂದು ರಾತ್ರಿ ವಗ್ಗ ಸಮೀಪ ಅಪಾಘತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ.
ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ಡೆಕ್ಕಲೊಟ್ಟು ಮನೆಯ ರಾಜೇಂದ್ರ ಪೂಜಾರಿ (45ವ) ಮೃತಪಟ್ಟವರು. ಮೃತರು ಪತ್ನಿ ಹಾಗೂ 3 ಮಕ್ಕಳನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.