ರಾಜ್ಯ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು



ಬೆಂಗಳೂರು: ಜ್ವರ ಹಾಗೂ ತೀವ್ರ ಉಸಿರಾಟದ ಸಮಸ್ಯೆಯ ಕಾರಣ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಸೆ.24ರಂದು ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದೆ. ಎಸ್‌.ಎಂ.ಕೃಷ್ಣ ಅವರು ಚಿಕಿತ್ಸೆ ಸ್ಪಂದಿಸುತ್ತಿದ್ದು, ಯಾವುದೇ ಆತಂಕವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.

ಸದ್ಯ ಆರೋಗ್ಯ ಸಚಿವ ಡಾ‌.ಸುಧಾಕರ್ ಮೇಲ್ವಿಚಾರಣೆ ನಡೆಸುತ್ತಿದ್ದು, ವೈದ್ಯರ ತಂಡದ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

Leave a Reply

Your email address will not be published. Required fields are marked *

error: Content is protected !!