ಪುತ್ತೂರು: ಬೈಕ್-ಬಸ್ ಮಧ್ಯೆ ಅಪಘಾತ; ವಿದ್ಯಾರ್ಥಿಗಳಿಬ್ಬರು ಆಸ್ಪತ್ರೆಗೆ ದಾಖಲು
ಪುತ್ತೂರು: ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜ.8ರಂದು ಬೆಳಿಗ್ಗೆ ನಡೆದಿದ್ದು, ಅಪಘಾತದಿಂದ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ತೀವ್ರ ಗಾಯಗೊಂಡ ಘಟನೆ ದಾರಂದಕುಕ್ಕು ಕೊಲ್ಯ ಎಂಬಲ್ಲಿ ಜ.8ರಂದು ನಡೆದಿದೆ.

ವಿದ್ಯಾರ್ಥಿಗಳಾದ ನಿಶಾಂತ್ ಮತ್ತು ಕಾರ್ತಿಕ್ ಗಾಯಗೊಂಡವರು ಎನ್ನಲಾಗಿದೆ. ಅವರು ಬೈಕ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ವಿರುದ್ದ ಧಿಕ್ಕಿನಿಂದ ಬಂದ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.