ರಾಜ್ಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರ ತಾಲೂಕಿನ ‌ಅಂಬಡಗಟ್ಟಿಯಲ್ಲಿ ಮಂಗಳವಾರ ಮುಂಜಾನೆ ಬೆಂಗಳೂರಿನಿಂದ ಬೆಳಗಾವಿಗೆ ವಾಪಾಸ್‌ ಆಗುತ್ತಿದ್ದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ‌ಹಟ್ಟಿಹೊಳಿ ಅವರು ಸಂಚರಿಸುತ್ತಿದ್ದ ಕಾರಿಗೆ ನಾಯಿ ಅಡ್ಡಬಂದು ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿತ್ತು.

ಪರಿಣಾಮ ಲಕ್ಷ್ಮೀ ಹೆಬ್ಬಾಳಕರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿತ್ತು. ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆಯ ಆರೋಗ್ಯ ಸ್ಥಿತಿಯ ಬಗ್ಗೆ ಡಾ. ರವಿ ಪಾಟೀಲ ಮಾಹಿತಿ ನೀಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬೆನ್ನಿಗೆ ಬಲವಾದ ಪೆಟ್ಟು ಬಿದ್ದಿದೆ. ಬೆನ್ನಿನ L1 ಹಾಗೂ L4 ಫ್ರಾಕ್ಚರ್ ಆಗಿದೆ. ಎಂಆರ್‌ಐ ಸ್ಕ್ಯಾನ್‌‌ನಲ್ಲಿ ಎರಡು ಕಡೆ ಫ್ರಾಕ್ಚರ್ ಆಗಿರುವುದು ಕಂಡು ಬಂದಿದೆ. ಎರಡು ದಿನಗಳ ಕಾಲ ಚಿಕಿತ್ಸೆ ನೀಡಿ‌ ಡಿಸ್ಚಾರ್ಜ್ ಮಾಡುತ್ತೇವೆ. ಒಂದು ತಿಂಗಳ ಕಾಲ ಬೆಡ್ ರೆಸ್ಟ್‌ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!