ಬೈಕ್ ಗಳ ನಡುವೆ ಅಪಘಾತ: ಬಾಲಕಿ ಮೃತ್ಯು
ಬಂಟ್ವಾಳ: ಬೈಕ್ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ. ಬೈಕ್ ಚಾಲಕ ಬಾಲಕಿಯ ತಂದೆ ಅಬ್ದುಲ್ ರಹಮಾನ್ ಕೂಡ ಗಾಯಗಳು ಆಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಂಜಿತ್ ಎಂಬವರ ಬೈಕ್ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.