ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ, ಮೂವರು ಅರೆಸ್ಟ್
ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬ್ಯಾಂಕ್ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ದರೋಡೆಕೋರರ ಬಂಧನದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಕೆ.ಸಿ.ರೋಡ್ನ ಶಾಖೆಯಲ್ಲಿ ಜನವರಿ 17ರಂದು ಕೋಟೆಕಾರು ಬ್ಯಾಂಕ್ನಲ್ಲಿ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು. ಬಂಧಿತರಿಂದ 2 ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಸ್ಪಷ್ಟಪಡಿಸಿದ್ದಾರೆ.