ಕರಾವಳಿ

ಈಡನ್ ಗ್ಲೋಬಲ್ ಶಾಲೆಯಲ್ಲಿ ಈಡನ್ ಇಂಫಾಟಿಯ ಕೆಜಿ ಫೆಸ್ಟ್

ಪುತ್ತೂರು: ಬೆಳಂದೂರು “ಈಡನ್ ಗ್ಲೋಬಲ್ ಸ್ಕೂಲ್ ಇದರ ಈಡನ್ ಇಂಫಾಟಿಯ ಕೆಜಿ ಫೆಸ್ಟ್  ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಕಿಂಡರ್ ಗಾರ್ಟನ್ ವಿದ್ಯಾರ್ಥಿಯಾದ ಮುಹಮ್ಮದ್ ರಾಫಿ ಪ್ರಾರ್ಥನೆಯ ಮೂಲಕ ಪ್ರಾರಂಭಿಸಿ ಸ್ವಾಗತ ನೃತ್ಯದ ಮೂಲಕ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಕಿಂಡರ್ ಗಾರ್ಟನ್ ಕೋಆರ್ಡಿನೆಟರ್ ಆದ ಶ್ರುತಿ ಶೆಟ್ಟಿ ಕೆ ಅತಿಥಿಗಳನ್ನು ಸ್ವಾಗತಿಸಿದರು.ಸಂಸ್ಥೆಯ ಆಡಳಿತ ಸಮಿತಿಯ ಸದಸ್ಯರಾದ ಪುತ್ತುಬಾವ ಹಾಜಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಆಡಳಿತ ಸಮಿತಿಯ ಕಾರ್ಯದರ್ಶಿ ಬಶೀರ್ ಹಾಜಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಿಕ್ಷಣ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇದರ ಪ್ರಾಂಶುಪಾಲರಾದ ಶಂಕರ್ ಭಟ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶಿಕ್ಷಣದ ಜೊತೆ ಶಿಸ್ತಿನ ಮಹತ್ವವನ್ನು ತಿಳಿಸಿದರು ಮತ್ತು ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ಅವರನ್ನು ಗೌರವಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ರಂಝೀ ಮುಹಮ್ಮದ್ ಕೆಜಿ ಶಿಕ್ಷಣದ ಮಹತ್ವವನ್ನು ತಿಳಿಸಿದರು.ಅದೇ ರೀತಿ ಕಾರ್ಯಕ್ರಮದಲ್ಲಿ ಶೈಕ್ಷಣಿಕ ವರ್ಷದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಅಲ್ ಮದೀನಾ ಸಂಸ್ಥೆಯ ಸಂಚಾಲಕರಾದ ಮುಹಮ್ಮದ್ ನೌಮನ್, ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಮೋಹನನ್ ಮತ್ತು ಉಮೇಶ್ವರಿ, ಪೋಷಕ ಪ್ರತಿನಿಧಿಗಳಾದ ಮುಹಮ್ಮದ್ ಇಕ್ಬಾಲ್ ಮತ್ತು ರಝಾಕ್ ಕೆನರಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ನಂತರ ಕೆಜಿ ಮಕ್ಕಳ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮೆರುಗುಗೊಳಿಸಿತು. ಕಾರ್ಯಕ್ರಮಕ್ಕೆ ಸಂಸ್ಥೆಯ ಆಡಳಿತ ಸಮಿತಿಯ ಪದಾಧಿಕಾರಿಗಳು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋದಕ ಮತ್ತು ಬೋಧಕೇತರ ವರ್ಗದವರು,ಪೋಷಕರು ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಕಿಯರಾದ ಕುಮಾರಿ ಸಂಶಿದ ಹಾಗೂ ಕುಮಾರಿ ಹರ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಿಂಡರ್ ಗಾರ್ಟೆನ್ ಶಿಕ್ಷಕಿ ದೀಕ್ಷಿತ ರೈ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!