ಕನಕಮಜಲು: ಅಂಗಡಿಯೊಳಗೆ ನುಗ್ಗಿ ಕಳ್ಳತನ ನಡೆಸುತ್ತಿದ್ದ ಕಳ್ಳರನ್ನು ರೆಡ್ ಹ್ಯಾಂಡಾಗಿ ಹಿಡಿದ ಊರವರು
ಸುಳ್ಯ: ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ರೆಡ್ ಹ್ಯಾಂಡಾಗಿ ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ.

ಕನಕಮಜಲು ಗ್ರಾಮದ ಗಣೇಶ್ ಸ್ಟೋರ್ ನ ಒಳಗೆ ಮಧ್ಯ ರಾತ್ರಿ ಜೋರು ಶಬ್ದ ಕೇಳಿದ್ದು ಈ ವೇಳೆ ಸ್ಥಳೀಯರೋರ್ವರು ಅಂಗಡಿ ಬಳಿ ಬಂದು ನೋಡಿದಾಗ, ಎದುರೊಂದು ರಿಟ್ಝ್ ಕಾರು ಇತ್ತೆಂದೂ, ಅಂಗಡಿ ಶೆಟರ್ ಒಡೆದಿತ್ತೆನ್ನಲಾಗಿದೆ. ತಕ್ಷಣ ಅವರು ಮನೆಯವರಿಗೆ ಹಾಗೂ ಕನಕಮಜಲಿನ ಸ್ಥಳೀಯರಿಗೆ ಈ ವಿಷಯ ತಿಳಿಸಿದ್ದು, ತಕ್ಷಣ ಅಂಗಡಿಯೆದುರು ಜನ ಸೇರಿ ಅಂಗಡಿಯ ಎದುರು ನಿಂತಿದ್ದ ಹಾಗೂ ಅಂಗಡಿಯೊಳಗೆ ಕಳವು ನಡೆಸುತ್ತಿದ್ದ ಕಳ್ಳನನ್ನು ಹಿಡಿದಿದ್ದಾರೆ.
ವಿಚಾರಿಸಿದಾಗ ಸುಹೈಲ್ ಹಾಗೂ ರಿಯಾಜ್ ಎಂದು ಪರಿಚಯ ಹೇಳಿದರೆನ್ನಲಾಗಿದೆ. ಅಲ್ಲದೆ ಬಾಡಿಗೆ ಕಾರಿನಲ್ಲಿ ಅವರು ಬಂದಿದ್ದರೆಂದು ತಿಳಿದುಬಂದಿದೆ. ಬಳಿಕ ಇಬ್ಬರು ಕಳ್ಳರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.