ಭಾರತ್ ಜೋಡುದಲ್ಲಿ ಪ್ರಿಯಾಂಕಾ ಗಾಂಧಿ ಭಾಗಿ
ಕೋಲಾರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ ಸಾಗುತ್ತಿದ್ದು, ಅಕ್ಟೋಬರ್ 7 ರಂದು ಮಂಡ್ಯಕ್ಕೆ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದು, ಕೋಲಾರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ತಿಳಿಸಿದರು.
![](http://newsbites.in/wp-content/uploads/2022/10/20221003_213131-193x300.jpg)
ಅಕ್ಟೋಬರ್ 7 ರ ಪ್ರಿಯಾಂಕಾ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸಂಬಂಧ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಕ್ಟೋಬರ್ 7 ರ ಮಂಡ್ಯ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶಿಸೋಣ. ದೇಶದಲ್ಲಿ ನಡೆಯುತ್ತಿರುವ ದುರಾಡಳಿತ, ಭ್ರಷ್ಟಾಚಾರ, ಕೋಮು ಸಾಮರಸ್ಯ ಕದಡುವಿಕೆ ಕೃತ್ಯಗಳಿಗೆ ಕಾರಣವಾದ ಸರಕಾರದ ನೀತಿಯನ್ನು ಜನರಿಗೆ ತಿಳಿಸಲು ಈ ಯಾತ್ರೆ ನಡೆಸಲಾಗುತ್ತಿದೆ, ಒಡೆದು ಹೋದ ಮನಸ್ಸುಗಳನ್ನು ಒಂದು ಮಾಡುವ ಮೂಲಕ ಕೋಮು ಸಾಮರಸ್ಯ ತರುವ ಉದ್ದೇಶ ರಾಹುಲ್ ಗಾಂಧಿಯವರ ಯಾತ್ರೆಯದ್ದಾಗಿದೆ ಎಂದರು.