ಕ್ರೀಡೆರಾಷ್ಟ್ರೀಯ

ಐಪಿಎಲ್ ಮೊದಲ ಪಂದ್ಯದಲ್ಲೇ ಮಿಂಚಿದ ವಿಘ್ನೇಶ್ ಪುತ್ತೂರು ಅವರನ್ನು ಶ್ಲಾಘಿಸಿದ ಧೋನಿ

ಐಪಿಎಲ್ 2025ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸ ಮುಂಬೈ ವಿರುದ್ಧ ಚೆನ್ನೈ 4 ವಿಕೆಟ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಸಿಎಸ್‌ಕೆ ಆವೃತ್ತಿಯ ಶುಭಾರಂಭ ಮಾಡಿತು. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು.



156 ರನ್ ಗುರಿ ಬೆನ್ನತ್ತಿದ ಸಿಎಸ್‌ಕೆ ಇನ್ನೂ ಐದು ಎಸೆತಗಳು ಬಾಕಿ ಇರುವಾಗಲೇ ಗುರಿ ಮುಟ್ಟಿತು. ರಚಿನ್ ರವೀಂದ್ರ 45 ಎಸೆತಗಳಲ್ಲಿ ಅಜೇಯ 65 ರನ್ ಗಳಿಸಿ ತಂಡಕ್ಕೆ ನೆರವಾದರು.

ಮುಂಬೈ ಇಂಡಿಯನ್ಸ್ ಪರ ಆಡಿದ ಯುವ ಸ್ಪಿನ್ನರ್ ವಿಘ್ನೇಶ್ ಪುತ್ತೂರು ತಮ್ಮ ಐಪಿಎಲ್ ಚೊಚ್ಚಲ ಪಂದ್ಯದಲ್ಲಿಯೇ ಉತ್ತಮ ಪ್ರದರ್ಶನ ನೀಡಿದರು. ಬಲಿಷ್ಠ ಸಿಎಸ್‌ಕೆ ತಂಡದ ಪ್ರಮುಖ ಮೂರು ವಿಕೆಟ್ ಪಡೆದರು. 24 ವರ್ಷದ ಸ್ಪಿನ್ನರ್ ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ದೀಪಕ್ ಹೂಡಾ ಅವರ ವಿಕೆಟ್ ಕಬಳಿಸಿದರು.

ಮುಂಬೈ ತಂಡ ಸೋಲು ಕಂಡರೂ, ವಿಘ್ನೇಶ್ ಅವರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಸಿಎಸ್‌ಕೆ ಗೆಲುವಿನ ನಂತರ ಉಭಯ ತಂಡಗಳ ಆಟಗಾರರು ಪರಸ್ಪರ ಶುಭಾಶಯ ಕೋರಿದರು. ಈ ವೇಳೆ ಮಾಜಿ ನಾಯಕ ಎಂಎಸ್ ಧೋನಿ, ವಿಘ್ನೇಶ್‌ ಅವರನ್ನು ಶ್ಲಾಘಿಸಿದರು.
ಧೋನಿ ಎಲ್ಲರೊಂದಿಗೆ ಹಸ್ತಲಾಘವ ಮಾಡುತ್ತಿದ್ದಾಗ, ವಿಘ್ನೇಶ್ ಬಂದಾಗ ಅವರ ಬಳಿ ಮಾತನಾಡಿದರು. ಚೊಚ್ಚಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಅವರ ಭುಜ ತಟ್ಟಿ ಹುರಿದುಂಬಿಸಿದರು. ಇದನ್ನು ನೋಡಿದ ಕಮೆಂಟೇಟರ್ ರವಿಶಾಸ್ತ್ರಿ, ‘ಯುವ ವಿಘ್ನೇಶ್ ಪುತ್ತೂರು ಅವರ ಭುಜದ ಮೇಲೆ ಧೋನಿ ತಟ್ಟಿದರು. ಅವರು ಅದನ್ನು ಬಹಳ ಸಮಯದವರೆಗೆ ಮರೆಯುತ್ತಾರೆ ಎಂದು ನಾನು ಭಾವಿಸುವುದಿಲ್ಲ’ ಎಂದು ಹೇಳಿದರು.
ಪಂದ್ಯದ ನಂತರ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಸೂರ್ಯಕುಮಾರ್ ಯಾದವ್, ವಿಘ್ನೇಶ್ ಅವರ ಅದ್ಭುತ ಬೌಲಿಂಗ್ ನ್ನು ಹೊಗಳಿದರು.

Leave a Reply

Your email address will not be published. Required fields are marked *

error: Content is protected !!