ಕರಾವಳಿ

ವಿಟ್ಲ ಪಟ್ಟಣ ಪಂಚಾಯತ್ ೨೪ ಗಂಟೆಯೂ ಕುಡಿಯುವ ನೀರು ಪೂರೈಕೆ:ಶಾಸಕ ಅಶೋಕ್ ರೈ

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಿನ ದಿನ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಗೆ ದಿನದ 24 ಗಂಟೆಯೂ ನೀರು ಪೂರೈಕೆ ಮಾಡುವಲ್ಲಿ ಈಗ ಮಾಡಿಕೊಂಡಿರುವ ವ್ಯವಸ್ಥೆ ಸಮರ್ಪಕವಾಗಿ ಇಲ್ಲ, ಇದನ್ನು ಬದಲಾಯಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಗ್ರಾಮೀಣ ಕುಡಿಯುವ ನೀರು ಮತ್ತುಯ ನೈರ್ಮಲ್ಯ ಇಲಖೆ ಯ ಅಪರ ಕಾರ್ಯದರ್ಶಿ ಅಂಜು ಪರ್ವೆಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.



ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸುಮಾರು 49 ನೀರಿನ ಬ್ಯಾಂಕ್ ಗಳಿಗೆ ನೀರು ಪೂರೈಕೆ ಮಾಡುವ ಯೋಜನೆಯನ್ನು ಸರಕಾರ ಜಾರಿ ಮಾಡಿತ್ತು ಆದರೆ ಇದರ ಬದಲಾಗಿ ಕಾಮಗಾರಿಯಲ್ಲಿ ಬದಲಾವಣೆ ಮಾಡಿ  ಇದರ ಬದಲಿಗೆ 3.5 ಲಕ್ಷ ಲೀಟರ್ ಸಾಮರ್ಥ್ಯದ ಒಂದೇ ಟ್ಯಾಂಕ್‌ಗೆ ನೀರು ತುಂಬಿಸುವ ಕಾಮಗಾರಿ ಕೈಗೆತ್ತಿಕೊಂಡಿದ್ದು, ಇದು ವಿಟ್ಲ ಪಟ್ಟಣ ಪಂಚಾಯತ್ ಗೆ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಲೋಪವನ್ನು ಸೃಷ್ಟಿಸುತ್ತದೆ.  ಈ ಹಿಂದೆ ಡಿ.ಪಿ.ಎ.ಆರ್‌ನಲ್ಲಿ ತಿಳಿಸಿರುವಂತೆ 49 ನೀರಿನ ಟ್ಯಾಂಕ್‌ಗಳಿಗೆ ನೀರು ಪೂರೈಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಲ್ಲಿ ವಿಟ್ಲ ಪಟ್ಟಣ ಪಂಚಾಯಿತಿಗೆ ಸಮಗ್ರವಾಗಿ ನೀರು ಪೂರೈಸಲು ಸಾಧ್ಯವಾಗಲಿದೆ.ಆದ್ದರಿಂದ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯು ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೀರಿನ ಬ್ಯಾಂಕ್‌ಗಳಿಗೆ ನೀರು ಸರಬರಾಜು ಮಾಡಲು ಬೇಕಾಗುವಂತಹ ಅನುದಾನವನ್ನು ಇದೇ ಯೋಜನೆ ಅಡಿಯಲ್ಲಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಶಾಸಕರು ಮನವಿಯಲ್ಲಿ ವಿನಂತಿಸಿದ್ದಾರೆ.ಈ ಸಂಬಂಧ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಖೆಯ ಮುಖ್ಯ ಇಂಜನಿಯರ್ ಎಜಾಜ್‌ಹುಸೇನ್ ಜೊತೆಯೂ ಶಾಸಕರು ಮಾತುಕತೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!