ಕರಾವಳಿರಾಜ್ಯ

ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಿಗೆ ಅಭಿನಂದನೆ


ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡ ಕೆ.ಎಂ ಮುಸ್ತಫರನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಿವೃತ್ತ ಐಪಿಎಸ್ ಅಧಿಕಾರಿ ನಿಸಾರ್ ಅಹ್ಮದ್ ರವರು ಬೆಂಗಳೂರಿನ ಆಯೋಗದ ಕಚೇರಿಯಲ್ಲಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಹಾಯ, ಸೌಲಭ್ಯ ತಲುಪಿದಾಗ  ಸರ್ಕಾರ ನೀಡುವ ಸ್ಥಾನ ಮಾನಗಳು ಸಾರ್ಥಕ ವಾಗುತ್ತದೆ ಎಂದರು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಮಾಝುದ್ದೀನ್ ಬೇಗ್, ಕೆಎಂಡಿಸಿ ಮನ್ ಪೀತ್ ಸಿಂಗ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!