ರಾಜಕೀಯರಾಜ್ಯ

ಬಿಜೆಪಿಯವರು ನನ್ನನ್ನು ಗೌರವದಿಂದ ವಾಪಸ್ ಕರೆಯುತ್ತಾರೆ- ಉಚ್ಛಾಟಿತ ಶಾಸಕ ಯತ್ನಾಳ್

ಬೆಂಗಳೂರು: ಬಿಜೆಪಿಯವರು ನನ್ನನ್ನು ಗೌರವದಿಂದ  ವಾಪಸ್ ಕರೆಯಲಿದ್ದಾರೆ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೇಳಿದ್ದಾರೆ.

Oplus_131072

ನನ್ನನ್ನು ವಾಪಸ್ ಕರೆಯುವ ಸಮಯ ಬರುತ್ತದೆ. ಈ ಹಿಂದೆ ಅಮಿತ್ ಶಾ ಅವರು ನನ್ನನ್ನು ವಾಪಸ್ ಕರೆದಿದ್ದರು. ಪ್ರಧಾನಿ ಮೋದಿ ಅವರೇ ನನ್ನನ್ನು ಪಕ್ಷಕ್ಕೆ ವಾಪಸ್ ಸೇರಿಸಿಕೊಳ್ಳುತ್ತಾರೆ ಎಂದು ಯತ್ನಾಳ್ ಸುದ್ದಿಗಾರರಿಗೆ ತಿಳಿಸಿದರು.

ಸ್ವತಂತ್ರವಾಗಿ ರಾಜಕೀಯ ಪಕ್ಷ ಆರಂಭಿಸುವ ಯೋಚನೆ ಇಲ್ಲ. ಯಡಿಯೂರಪ್ಪ ಕುಟುಂಬದಿಂದಾಗಿ ಈಗಿನ ಬಿಜೆಪಿ ಹಾಳಾಗಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಅಸ್ಸಾಂನಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ನೋಡಿ. ಅವರು ಹಿಂದುತ್ವದ ಪರವಾಗಿದ್ದಾರೆ. ಆದರೆ ಇಲ್ಲಿ, ಇದು ಕುಟುಂಬ ಮತ್ತು ಲೂಟಿಗೆ ಸಂಬಂಧಿಸಿದೆ” ಎಂದು ಅವರು ಆರೋಪಿಸಿದರು.

Leave a Reply

Your email address will not be published. Required fields are marked *

error: Content is protected !!