ಇಂದು SDPI ವತಿಯಿಂದ ಸವಣೂರಿನಲ್ಲಿ ‘ಸಾಮಾಜಿಕ ನ್ಯಾಯ ದಿನಾಚರಣೆ’
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ “ಸರ್ವಾಧಿಕಾರ ಅಳಿಯಲಿ ಸಂವಿಧಾನ ಉಳಿಯಲಿ ” ಎಂಬ ಘೋಷಣೆಯೊಂದಿಗೆ
“ಸಾಮಾಜಿಕ ನ್ಯಾಯ ದಿನಾಚರಣೆ” ಕಾರ್ಯಕ್ರಮವು
ಸವಣೂರು ಜಂಕ್ಷನ್ ನಲ್ಲಿ ಬೆಳಿಗ್ಗೆ 10ಗಂಟೆಗೆ ನಡೆಯಲಿದೆ.

ಜಿಲ್ಲಾ ಮಟ್ಟದ ನಾಯಕರು, ಪ್ರಗತಿಪರ ಚಿಂತಕರು, ದಲಿತ ಮುಖಂಡರು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿಸಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.