ಕರಾವಳಿ

ಉಜಿರೆಗೆ ಆಗಮಿಸಿದ ಪುನೀತ್ ಕೆರೆಹಳ್ಳಿಯನ್ನು ತಡೆದು ವಾಪಸ್ ಕಳುಹಿಸಿದ ಪೊಲೀಸರು

ಉಜಿರೆ: ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ತಡೆದು ವಾಪಸ್ ಕಳುಹಿಸಿದ ಘಟನೆ ಎ.19ರಂದು ನಡೆದಿದೆ.

ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೂಲಿಬೆಲೆ ಆಗಮಿಸಿ ಭಾಷಣ ಮಾಡಲಿದ್ದು, ಈ ಕಾರ್ಯಕ್ರಮ ವೀಕ್ಷಿಸಲು ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಜಿಲ್ಲಾಧಿಕಾರಿ ಆದೇಶ ತೋರಿಸಿ ಹಿಂದಕ್ಕೆ ಕಳುಹಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಬರುವ ಮಾಹಿತಿ ತಿಳಿದು ಮಹೇಶ್ ಶೆಟ್ಟಿ ಬೆಂಬಲಿಗರು ಉಜಿರೆಯಲ್ಲಿ ಜಮಾಯಿಸಿದ್ದರು. ಮಾತಿನ ಚಕಮಕಿಯೂ ನಡೆದಿದೆ ಎನ್ನಲಾಗಿದೆ. ಆದರೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ಪರಿಸ್ಥಿತಿ ನಿರ್ಮಾಣ ಆಗಿತ್ತಾದರೂ ಪೊಲೀಸರು ಪರಿಸ್ಥಿತಿ ನಿಭಾಯಿಸಲು ಯಶಸ್ವಿಯಾದರು.

Leave a Reply

Your email address will not be published. Required fields are marked *

error: Content is protected !!