ಕರಾವಳಿ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಕಡಬದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಕಡಬ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಸಂತಾಪ ಸೂಚಕ ಹಾಗೂ ಕೇಂದ್ರ ಸರ್ಕಾರ ವೈಫಲ್ಯದ ವಿರುದ್ದ ಯುವ ಕಾಂಗ್ರೆಸ್ ವತಿಯಿಂದ ಕಡಬ ಪೇಟೆಯಲ್ಲಿ ಮೊಂಬತ್ತಿ ಹೊತ್ತಿಸಿ ಸಂತಾಪ ಸೂಚನೆ ಸಲ್ಲಿಸಲಾಯಿತು.

ಸುಳ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಫೈಝಲ್ ಕಡಬ ನೇತೃತ್ವದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಸಹಕಾರದೊಂದಿಗೆ ಪ್ರತಿಭಟನೆ ನಡೆಯಿತು.

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ ಕೆ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ.ಪಿ ವರ್ಗೀಸ್, ಹಾಗೂ ಅಶ್ರಫ್ ಶೇಡಿಗುಂಡಿ, ಇಕ್ಬಾಲ್ ನೆಲ್ಯಾಡಿ, ಹನೀಫ್ ಹಾಜಿ, ಶೆರೀಫ್ ಸತೀಶ್ ಭೂಮಿಕಾ ಶಾಲಿನ್ ಸತೀಶ್, ಗಣೇಶ ಕೈಕುರೆ ಹಾಗೂ ಪಕ್ಷದ ವಿವಿಧ ನಾಯಕರುಗಳು ಯುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!