ಕರಾವಳಿಕ್ರೈಂ

ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಪುಂಡಾಟ, ಪ್ರಕರಣ ದಾಖಲು

ಉಪ್ಪಿನಂಗಡಿ: ಎ. 27ರಂದು ರಾತ್ರಿ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಕಡಬ ತಾಲೂಕು ಪೆರಾಬೆ ಗ್ರಾಮದ ಪರಿಸರದಲ್ಲಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಪೆರಾಬೆ ಕಡೆಯಿಂದ ಆಲಂಕಾರು ಕಡೆಗೆ 3 ಕಾರುಗಳನ್ನು ಅದರ ಚಾಲಕರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ರಸ್ತೆಯಲ್ಲಿ ಅಪಾಯಕಾರಿಯಾಗಿ ಚಾಲನೆ ಮಾಡಿಕೊಂಡು ತೆರಳುತ್ತಿರುವುದು ಹಾಗೂ ಸದ್ರಿ ಕಾರುಗಳಲ್ಲಿದ್ದ ಸಹ ಪ್ರಯಾಣಿಕರು ಅಪಾಯಕಾರಿಯಾಗಿ ಕಿಟಕಿಯಿಂದ ಹೊರಬಂದು ಬೊಬ್ಬೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ. ಘಟನೆ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ  ಅ.ಕ್ರ: 30/2025 ಕಲಂ: 281, BNS-2023 184 IMV Act ರಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!