ಕರಾವಳಿ

ಮಂಗಳೂರು ಗುಂಪು ಹತ್ಯೆ ಪ್ರಕರಣ: ಗೃಹ ಸಚಿವರ ಹೇಳಿಕೆ ಬೇಸರ ತಂದಿದೆ – ಸಂಶುದ್ದೀನ್ ಅಜ್ಜಿನಡ್ಕ

ಮಂಗಳೂರಿನಲ್ಲಿ ಕೇರಳದ ಅಶ್ರಫ್ ಎಂಬ ಯುವಕನನ್ನು  ಗುಂಪು ಹತ್ಯೆ ನಡೆಸಿದ ಘಟನೆ ಖಂಡನಿಯ, ಪೊಲೀಸರು ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಪ್ರಕಾರ ಅವರಿಗೆ ಗರಿಷ್ಠ ಶಿಕ್ಷೆ ಕೊಡಿಸಬೇಕು ಎಂದು ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಹೇಳಿದ್ದಾರೆ.

ಘಟನೆ ಕುರಿತು ಹೇಳಿಕೆ ನೀಡಿದ ಗೃಹ ಸಚಿವರ ನಡೆ ಬೇಸರ ತಂದಿದೆ, ಜವಾಬ್ದಾರಿಯತ ಸ್ಥಾನದಲ್ಲಿರುವ ಗೃಹ ಸಚಿವರು ಮಾಹಿತಿ ಸರಿಯಾಗಿ ತಿಳಿದುಕೊಂಡು ಹೇಳಿಕೆ ಕೊಡಬೇಕು, ಅವರು ನೀಡಿರುವ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.


ದ.ಕ.ಜಿಲ್ಲೆಯಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು  ಹಲ್ಲೆ ನಡೆಸುವುದು, ಸಮುದಾಯದ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ಕೆಲಸ ನಡೆಯುತ್ತಿದ್ದು
ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗುತ್ತಿದೆ, ಖುದ್ದು ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಬಗ್ಗೆ ಮುತುವರ್ಜಿವಹಿಸಿ ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕು ಎಂದು ಸಂಶುದ್ದೀನ್ ಅಜ್ಜಿನಡ್ಕ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!