ಕರಾವಳಿ

ಸುಹಾಸ್‌ ಶೆಟ್ಟಿ ಮನೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೊಲೆಯಾಗಿರುವ ಸುಹಾಸ್‌ ಶೆಟ್ಟಿ ಅವರ ಕಾರಿಂಜದಲ್ಲಿರುವ ಮನೆಗೆ ಭೇಟಿ ನೀಡಿ ದುಃಖದಲ್ಲಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಘಟನೆಗೆ ಸಂಬಂಧಿಸಿದಂತೆ ಸುಹಾಸ್‌ ಶೆಟ್ಟಿ ಅವರ ತಂದೆ-ತಾಯಿ ಹಾಗೂ ಕುಟುಂಬಸ್ಥರ ಜತೆಗೆ ಮಾತನಾಡಿ ಮಾಹಿತಿ ಪಡೆದುಕೊಂಡ ಚೌಟ ಅವರು ಘಟನೆ ನಡೆದ ಸಂದರ್ಭದಲ್ಲಿ ವಿದೇಶದಲ್ಲಿದ್ದ ಕಾರಣ ಬರಲು ಸಾಧ್ಯವಾಗದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.



ಮಗನನ್ನು ಕಳೆದುಕೊಂಡು ತೀವ್ರ ನೋವಿನಲ್ಲಿರುವ ಸುಹಾಸ್‌ ಕುಟುಂಬಕ್ಕೆ ನ್ಯಾಯ ಕೊಡಿಸುವುದಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಈ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಒತ್ತಡ ಹೇರುವ ಮೂಲಕ ಸುಹಾಸ್‌ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಪ್ರಯತ್ನಗಳನ್ನು ಮಾಡುವುದಾಗಿ ಸಂಸದ ಬೃಜೇಶ್ ಚೌಟ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!