ಕರಾವಳಿಕ್ರೈಂರಾಜ್ಯ

ಧರ್ಮಸ್ಥಳದ ಯುವತಿ ಪಂಜಾಬ್‌’ನಲ್ಲಿ ನಿಗೂಢ ಸಾವು

ಬೆಳ್ತಂಗಡಿ: ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಧರ್ಮಸ್ಥಳದ ಅಕಾಂಕ್ಷ ಎಸ್‌.ಎನ್‌ (22) ಪಂಜಾಬ್‌ ನಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ.

ಧರ್ಮಸ್ಥಳ ಗ್ರಾಮದ ಬೊಳಿಯಾರುನ ಅಕಾಂಕ್ಷ  ಎಲ್‌.ಪಿ.ಯು ಕಾಲೇಜು ಪಂಜಾಬ್‌ ಪಗುವಾರ ಜಲಂದರ್‌ನಲ್ಲಿ ಕಲಿತು ಸ್ಪೇಸ್‌ ಜೆಟ್‌ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಪಂಜಾಬ್‌ನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ಈಕೆ, ಆರು ತಿಂಗಳ ಹಿಂದೆಯಷ್ಟೇ ಏರೋಸ್ಪೇಸ್‌ ಇಂಜಿನಿಯರ್‌ ಆಗಿ ದೆಹಲಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಜಪಾನ್‌ಗೆ ಉದ್ಯೋಗಕ್ಕೆ ಹೋಗುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಪಂಜಾಬ್‌ ಎಲ್‌.ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್‌ ಪಡೆಯಲು ತೆರಳಿದ್ದರು, ಈ ಕುರಿತು ತನ್ನ ಮನೆಯವರಿಗೆ ಕರೆ ಮಾಡಿ ಹೇಳಿದ್ದರು ಎಂದು ತಿಳಿದು ಬಂದಿದೆ.



ಪಂಜಾಬ್‌ನ ಜಲಂದರ್‌ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೇ 17 ರ ರಾತ್ರಿಯೇ ಮನೆ ಮಂದಿ ಪಂಜಾಬ್‌ಗೆ ತೆರಳಿದ್ದಾರೆ. ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದು ಬಂದಿದೆ ಎಂದು ವರದಿಯಾಗಿದೆ. ಆದರೆ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಆರೋಪ ಕೂಡಾ ಕೇಳಿ ಬಂದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!