ರಾಜ್ಯರಾಷ್ಟ್ರೀಯ

ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು, ಮೂವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಕಾರು ಬಾವಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಭಾನುವಾರ ವರದಿಯಾಗಿದೆ.


ಮೃತರನ್ನು ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ, ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.


ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ  ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!