ಕರಾವಳಿರಾಜಕೀಯ

ಕೆದಂಬಾಡಿ: ಕಾಂಗ್ರೆಸ್ ಬೂತ್ ಸಂಖ್ಯೆ 188ರ ಅಧ್ಯಕ್ಷರ ಆಯ್ಕೆಗೆ ವಿರೋಧ-ತುರ್ತು ಸಭೆ



ಪುತ್ತೂರು: ಕೆದಂಬಾಡಿ ಗ್ರಾಮದ ಕಾಂಗ್ರೆಸ್‌ನ ನಾಲ್ಕು ಬೂತ್ ಸಮಿತಿಗೆ ಇತ್ತೀಚೆಗೆ ಅಧ್ಯಕ್ಷರುಗಳನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನೇಮಕ ಮಾಡಿ ಆದೇಶಿಸಿದ್ದರು. ಆ ಪೈಕಿ ಕೆದಂಬಾಡಿ ಬೂತ್ 188ರ ಅಧ್ಯಕ್ಷರ ಆಯ್ಕೆಗೆ 188 ಸಂಖ್ಯೆ ಬೂತ್‌ನಲ್ಲಿ ಅಸಮಾಧಾನ ವ್ಯಕ್ತವಾಗಿದ್ದು ಈಗ ಆಯ್ಕೆಗೊಂಡಿರುವ ಅಧ್ಯಕ್ಷರನ್ನು ಕೂಡಲೇ ಬದಲಾವಣೆಗೊಳಿಸಬೇಕೆಂದು ಆಗ್ರಹಿಸಿ ಅಸಮಾಧಾನಿತ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸಭೆ ಸೇರಿ ತಮ್ಮ ಅಸಾಮಾಧಾನ ತೋಡಿಕೊಂಡಿದ್ದಾರೆ.



ಬೂತ್ ಸಂಖ್ಯೆ 188ರ ಅಧ್ಯಕ್ಷರಾಗಿ ಹಬೀಬ್ ಕಣ್ಣೂರು ಕಾರ್ಯನಿರ್ವಹಿಸುತ್ತಿದ್ದು ಇದೀಗ ಅವರು ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ಈ ಆಯ್ಕೆಯ ವಿರುದ್ಧ 188 ಸಂಖ್ಯೆಯ ಬೂತ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ ಅಧ್ಯಕ್ಷರ ಬದಲಾವಣೆಗೆ ಆಗ್ರಹಿಸಿ ಸಭೆ ನಡೆಸಿದ್ದಾರೆ.



ಮೇ.27ರಂದ ಶಾಫಿ ಬೇರಿಕೆ ಅವರ ಮನೆಯಲ್ಲಿ ಸಭೆ ಸೇರಿದ ಅಸಮಾಧಾನಿತ ಕಾಂಗ್ರೆಸ್ ಕಾರ್ಯಕರ್ತರು ಕೆದಂಬಾಡಿ ಬೂತ್ 188ರ ಅಧ್ಯಕ್ಷರನ್ನು ಕೂಡಲೇ ಬದಲಾವಣೆ ಮಾಡಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯನ್ನು ನೇಮಕ ಮಾಡಬೇಕೆಂದು ಆಗ್ರಹಿಸಿದರು.



ಕೆದಂಬಾಡಿ ಗ್ರಾ.ಪಂ ಸದಸ್ಯ ಮೆಲ್ವಿನ್ ಮೊಂತೆರೋ, ಕಾಂಗ್ರೆಸ್ ಮುಖಂಡ ಸೋಮಯ್ಯ ತಿಂಗಳಾಡಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!