ಮಂಗಳೂರು: ಶಾಹುಲ್ ಹಮೀದ್, ಎಂ. ಎಸ್ ಮುಹಮ್ಮದ್ ಸಹಿತ ಮುಖಂಡರ ರಾಜೀನಾಮೆ ಘೋಷಣೆ

ಮಂಗಳೂರು: ಕಾಂಗ್ರೆಸ್ ಪಕ್ಷದ ದಕ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಕೆ ಶಾಹುಲ್ ಹಮೀದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್ ಮೊದಲಾದವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಇಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಅಲ್ಪ ಸಂಖ್ಯಾತ ಸಭೆಯಲ್ಲಿ ಘೋಷಿಸಿದ್ದಾರೆ. ಬಹುತೇಕ ಎಲ್ಲ ಜಿಲ್ಲೆಯ ಕಾಂಗ್ರೆಸ್ ನ ವಿವಿಧ ಹುದ್ದೆಯಲ್ಲಿ ಇರುವ ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.