ಬಂಟ್ವಾಳ: ವ್ಯಕ್ತಿಯ ಕೊಲೆ ಯತ್ನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಬಂಟ್ವಾಳ: ಮೇ 16 ರಂದು ಶುಕ್ರವಾರ ರಾತ್ರಿ ಹಮೀದ್ ಎಂಬಾತನ ಮೇಲೆ ನಡೆದ ತಲವಾರಿ ದಾಳಿಯಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗಳಾದ ಉಳ್ಳಂಜೆಯ ನೌಷದ್, ಕೈಕಂಬದ ನಿವಾಸಿ ನವಾಜ್ ಯಾನೆ ಬೀಡಿ ನವಾಜ್, ನೆಹರುನಗರದ ಮೇಹರೂಪ್, ನೆಹರುನಗರದ ರಿಝಾನ್ ಎಂಬುವವರನ್ನು ಬಂಧನ ಮಾಡಲಾಗಿದೆ.