ಕರಾವಳಿ

ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ನಫೀಸಾ ಪೆರುವಾಯಿ ರಾಜೀನಾಮೆ



ವಿಟ್ಲ: ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ನಫೀಸಾ ಪೆರುವಾಯಿ ರಾಜೀನಾಮೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಪದೇ ಪದೇ ನಡೆಯುತ್ತಿರುವ ಅಹಿತಕರ ಘಟನೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ನಡೆದ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ವಿಚಾರದಲ್ಲಿ ಮೊದಲೇ ಸೂಕ್ತ ಕ್ರಮ ಕೈಗೊಳ್ಳಲು ಸರಕಾರ ವಿಫಲಗೊಂಡ ಹಿನ್ನೆಲೆಯಲ್ಲಿ ಬೇಸತ್ತು ಅವರು ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ.

ಕೆಲವು ದಿನಗಳಿಂದ ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಕೋಮುದ್ವೇಷ ಭಾಷಣ, ಸಭೆ, ಪ್ರತೀಕಾರದ ಹೇಳಿಕೆಗಳು ನೀಡುತ್ತಿದ್ದರೂ ಅದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ,ನಾವು ಶಾಂತಿ, ಸೌಹಾರ್ದತೆಯನ್ನು ಬಯಸುವವರಾಗಿದ್ದು ಅಮಾಯಕ ಯುವಕರ ಹತ್ಯೆ ಹಲ್ಲೆ ಘಟನೆಗಳು ನಡೆಯುತ್ತಿರುವಾಗ ಅದರ ವಿರುದ್ಧ ಕಠಿಣ ಕ್ರಮ ಜರುಗಿಸಿ ಶಾಂತಿ ಸ್ಥಾಪನೆ ಮಾಡಲು ಇಲಾಖೆ ಮತ್ತು ಸರಕಾರ ಕ್ರಮ ವಹಿಸಬೇಕು, ಸದ್ಯದ ಘಟನೆಗಳಿಂದ ಮನಸ್ಸಿಗೆ ಬೇಸರ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.


ಹತ್ಯೆಯಾದ ಅಮಾಯಕ ಯುವಕನಿಗೆ ನ್ಯಾಯ ಸಿಗಬೇಕು ಮತ್ತು ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸರಕಾರ ಮತ್ತು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಫೀಸಾ ಪೆರುವಾಯಿ ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!