ಪುತ್ತೂರು| ಗಡಿಪಾರು ವ್ಯಕ್ತಿಯ ವಿಚಾರದಲ್ಲಿ ತಪ್ಪು ಮಾಹಿತಿ ಹರಡಿದ ಆರೋಪ; ಓರ್ವನ ವಿರುದ್ದ ಪ್ರಕರಣ ದಾಖಲು
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವ್ಯಕ್ತಿಯೋರ್ವನ ಗಡಿಪಾರಿಗೆ ಸಂಬಂಧಿಸಿದ ವಿಚಾರದಲ್ಲಿ ವಾಟ್ಸ್ ಆಪ್ ಮೂಲಕ ತಪ್ಪು ಮಾಹಿತಿ ಮತ್ತು ಸ್ಥಳೀಯ ಆಡಳಿತಕ್ಕೆ ಅಪರಾಧಿಕ ಭಯ ಹುಟ್ಟಿಸಿದ ಆರೋಪದಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.

ಕಬಕ ಗ್ರಾಮದ ಗಣೇಶ್ ಪ್ರಸಾದ್ ಎಂಬಾತನು ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ಗಾಳಿ ಸುದ್ದಿಯನ್ನು ಹರಡುತ್ತಾ ಹಾಗೂ ಸ್ಥಳಿಯ ಆಡಳಿತಕ್ಕೆ ಭಯ ಹಾಗೂ ಅಪರಾಧಿಕ ಬೆದರಿಕೆಯನ್ನೊಡ್ಡಿರುವ ಕಾರಣ ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ಆರೋಪಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 41/2025 ಕಲಂ: 353(1), (b), 351(3) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.