ಕರಾವಳಿ

ದೇರಳಕಟ್ಟೆ ಕಣಚೂರು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಪ್ರಕರಣ: ಆರೋಪಿ ಬಂಧನ

ಮಂಗಳೂರು: ದೇರಳಕಟ್ಟೆಯ ಕಣಚೂರು ಮೆಡಿಕಲ್‌ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಘಟನೆಗೆ ಸಂಬಂಧಿಸಿ ಪೊಲೀಸರು ಅದೇ ಕಾಲೇಜಿನ ಪಿಜಿ ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ. ಬಾಂಬ್ ಬೆದರಿಕೆ ಬಗ್ಗೆ ದೂರು ನೀಡಿದವಳೇ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.



ಮೋನಿಕಾ ಚೌಧರಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈಕೆ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದು ಮೇ.4ರಂದು ಪಿಜಿ ವಿಷಯದಲ್ಲಿ ಸೆಮಿನಾರ್ ಮಂಡನೆ ಮಾಡುವುದಕ್ಕೆ ಟಾಸ್ಕ್ ಕೊಡಲಾಗಿತ್ತು. ಸೆಮಿನಾರ್ ತಪ್ಪಿಸುವುದಕ್ಕಾಗಿ ಮೋನಿಕಾ ಚೌಧರಿ ಅದೇ ದಿನ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿರುವುದಾಗಿ ಕಾಲೇಜು ಸಿಬಂದಿಗೆ ಸುಳ್ಳು ಹೇಳಿದ್ದಳು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.



ಜೂ.4ರಂದು ಬೆಳಗ್ಗೆ ಕಣಚೂರು ಮೆಡಿಕಲ್ ಕಾಲೇಜಿಗೆ ಅನಾಮೇದೆಯ ವ್ಯಕ್ತಿಯೊಬ್ಬರು ಕರೆ ಮಾಡಿ ಕಾಲೇಜಿಗೆ ಬಾಂಬ್ ಇಡಲಾಗಿದ್ದು ಹನ್ನೊಂದು ಗಂಟೆಗೆ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಹೇಳಿದ್ದರು. ಕೂಡಲೇ ಪೊಲೀಸರಿಗೆ ದೂರು ನೀಡಲಾಗಿತ್ತು, ಪೊಲೀಸರು,‌ ಬಾಂಬ್ ನಿಷ್ಕ್ರಿಯ ದಳ,‌ ಶ್ವಾನ
ದಳ ಮೊದಲಾದವರು ಬಂದು ತನಿಖೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬಾಂಬ್ ಕರೆ‌ ಎಂದು ಪೊಲೀಸರು ದೃಢಪಡಿಸಿದ್ದರು.

Leave a Reply

Your email address will not be published. Required fields are marked *

error: Content is protected !!