ಕರಾವಳಿಕ್ರೈಂ

ಕಡಬ: ಅಣ್ಣನ ಮೇಲೆ ಪೆಟ್ರೋಲ್ ಸುರಿದು ಕೊಲೆಯತ್ನ: ಅಣ್ಣ ಸಾವು

ಕಡಬ: ತಮ್ಮನೋರ್ವ ಅಣ್ಣನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಸ್ಪತ್ರೆಗೆ ದಾಖಲಾಗಿದ್ದ ಅಣ್ಣ ಚಿಕಿತ್ಸೆ ಫಲಕಾರಿಯಾಗದೆ ಜೂ9ರಂದು ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ನಡೆದಿದೆ.


ದ.ಕ. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್‌ ರೈಲು ಟ್ರ್ಯಾಕ್‌ ಸಮೀಪ ಜೂ 8 ರಂದು ತಮ್ಮ ಅಣ್ಣನ ಮೇಲೆ ಪೆಟ್ರೋಲ್‌ ಸುರಿದು ಕೊಲೆಗೆ ಯತ್ನ ಮಾಡಿದ್ದ.


ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನುಮಪ್ಪ (42) ಚಿಕಿತ್ಸೆ ಫಲಿಸದೆ ಮೃತ ಹೊಂದಿದ್ದಾನೆ. ಸಾವಿನ ನಂತರ ಪೊಲೀಸರು ಕೊಲೆಯತ್ನ ದ ಬದಲು ಕೊಲೆ ಪ್ರಕರಣವನ್ನು ದಾಖಲು ಮಾಡಿದ್ದಾರೆ.
ಮಂಗಳೂರು ರೈಲ್ವೇ ಪೊಲೀಸರು ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!