ಕರಾವಳಿ

ಮಂಗಳೂರು: ಬಿಜೆಪಿ ನಾಯಕರು ಪೊಲೀಸರ ಆತ್ಮ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ-ಐವನ್ ಡಿಸೋಜ

ಮಂಗಳೂರು: ಬಿಜೆಪಿಯ ರಾಜ್ಯ ನಾಯಕರು ದ.ಕ.ಜಿಲ್ಲೆಯ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ.


ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ ಹಲವು ಮುಖಂಡರು ದ.ಕ.ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ದಾಟಿಯಲ್ಲಿ ಮಾತನಾಡಿದ್ದಾರೆ.
ಕಾನೂನು ಪ್ರಕಾರ ಕಾರ್ಯಾಚರಿಸಲು ಪೊಲೀಸರಿಗೆ ಅವಕಾಶ ಕಲ್ಪಿಸುವ ಬದಲು ಬೆದರಿಕೆ ದಾಟಿಯಲ್ಲಿ ಮಾತನಾಡಿರವುದು ಸರಿಯಲ್ಲ. ರಾಜ್ಯದಲ್ಲಿ ಸರಕಾರ ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ. ಪೊಲೀಸ್ ಇಲಾಖೆ ಅವರ ಕೆಲಸ ಮಾಡುತ್ತಾರೆ. ತಮಗೆ ಬೇಕಾದ ಹಾಗೆ ಮಾಡಿಲ್ಲ ಅಂತ ಬಿಜೆಪಿಗರು ತಕರಾರು ತೆಗೆಯುವುದರಲ್ಲಿ ಅರ್ಥವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಕಾನೂನು ಮೀರಿ ಕೆಲಸ ಮಾಡಿದ್ದರೆ ಅದಕ್ಕೆ ಸರಕಾರ, ಕಾನೂನು, ನ್ಯಾಯಾಲಯವಿದೆ. ಪೊಲೀಸರು ಸುಮ್ಮನಾದರೆ ಏನೂ ಮಾಡಿಲ್ಲ ಎಂದು ಆರೋಪಿಸುವ ಬಿಜೆಪಿಗರು, ಪೊಲೀಸರು ತಮ್ಮ ಕೆಲಸ ಮಾಡಿದರೆ ಆಕ್ಷೇಪಿಸುತ್ತಾರೆ. ಜಿಲ್ಲೆ ಸದಾ ಅಶಾಂತಿಯಿಂದ ಕೂಡಿರಬೇಕೇ? ಅಭಿವೃದ್ಧಿಯು ಬಿಜೆಪಿಗೆ ಬೇಡವೇ? ಪೊಲೀಸ್ ಇಲಾಖೆಯಿಂದ ತಪ್ಪು ಆಗಿರುವುದಾದರೂ ಏನು? ಯಾರ ಮೇಲೆ ಸುಳ್ಳು ಕೇಸು ಹಾಕಲಾಗಿದೆ ಎಂಬುದನ್ನಾದರೂ ತಿಳಿಸಲಿ ಎಂದು ಬಿಜೆಪಿ ಗೆ ಸವಾಲು ಹಾಕಿದ ಐವನ್ ಡಿಸೋಜ, ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಚ್ಯುತಿ ತರುವ ಬಿಜೆಪಿ ಮುಖಂಡರ ಮೇಲೆ ರಾಜ್ಯ ಸರಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!