ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ: ಮಾಜಿ ಶಾಸಕ ಮೊಯ್ದೀನ್ ಬಾವ ವಿರುದ್ದ ಪ್ರಕರಣ ದಾಖಲು
ಮಂಗಳೂರು: ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಬಂಧಿಸಿ ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ ಮತ್ತು ಇತರ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.

ಜೂ.9ರಂದು ರಾತ್ರಿ ಸುಮಾರು 8-00 ಗಂಟೆಗೆ ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ ರವರು ಮತ್ತು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತು ಎನ್.ಎಂ.ಪಿ.ಎ ಕಛೇರಿಯ ಡೆಪ್ಯೂಟಿ ಚೇರ್ಪರ್ಸನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿದ್ದಾರೆ.
ನಂತರ ಅವರು ಹೊರಗೆ ಬಂದಾಗಲೂ ಹಿಂಬಾಲಿಸುತ್ತಾ ಬೆದರಿಕೆ ಹಾಕಿ ಕಿರಿಚುತ್ತಾ ಬಂದಿದ್ದು, ಕಾರಿನಲ್ಲಿ ಬೇರೆ ಕರ್ತವ್ಯಕ್ಕೆ ಹೋಗುತ್ತಿರುವಾಗ ಕಾರನ್ನು ತಡೆದು ನಿಲ್ಲಿಸಿ, ವಾದ-ವಿವಾದ ಮಾಡಿರುವ ಬಗ್ಗೆ Secretary, NMPA, Panambur, Mangaluru ರವರು ದಿನಾಂಕ 10-06-2025 ರಂದು ಸಂಜೆ ದೂರು ನೀಡಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.