ಕರಾವಳಿ

ಪುತ್ತೂರು| ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ

ಪುತ್ತೂರು: ದ ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಅವರು ಜೂ.11ರಂದು ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮತ್ತು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



ಪಲ್ಲತ್ತೋಡಿ ರಸ್ತೆ ಬದಿ ಭೂಕುಸಿತ ಉಂಟಾಗಿದ್ದು ಅದನ್ನು ಪರಿಶೀಲನೆ ನಡೆಸಿದ ಡಾ.ಆನಂದ್ ಅವರು ಬಳಿಕ
ವೀರಮಂಗಲ ಗುತ್ತು ನಾರ್ಣಪ್ಪ ಗೌಡರ ಮನೆ ಬಳಿ ಧರೆ ಕುಸಿಯುವ ಸಾಧ್ಯತೆ ಇರುವುದರಿಂದ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



ವೀರಮಂಗಲ ಪಿಎಂಶ್ರೀ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬೆರೆತು ಶಾಲೆಯ ಚಟುವಟಿಕೆಗಳ ಬಗ್ಗೆ ಮತ್ತು ಬೇಡಿಕೆಗಳ ಬಗ್ಗೆ ವಿಚಾರಿಸಿದರು. ಪುತ್ತೂರು ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಎಚ್, ತಾಲೂಕು ನರೇಗಾ ಸಹಾಯಕ ನಿರ್ದೇಶಕ ವಿಲ್ಫ್ರೆಡ್ ರೋಡ್ರಿಗಸ್ ಹಾಗೂ ನರಿಮೊಗರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು ಜೊತೆಗಿದ್ದರು.

Leave a Reply

Your email address will not be published. Required fields are marked *

error: Content is protected !!