ಕರಾವಳಿಕ್ರೈಂ

ಮಂಗಳೂರು: ಚೂರಿ ಇರಿತದಿಂದ ಗಾಯಗೊಂಡಿದ್ದ ಯುವಕ ಸಾವು

ಮಂಗಳೂರು: ಜೂನ್ 6 ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ


ಜೂನ್ 6 ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೌಶಿಕ್ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಹಾಡಹಗಲೇ ನಡೆದಿದ್ದು, ಬಿಜೈನ ಬ್ರಿಜೇಶ್ ಶೆಟ್ಟಿ  ಎಂಬವರು ಕೌಶಿಕ್ ಹೊಟ್ಟೆಗೆ ಇರಿದು ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣ ಹಳೆಯ ದ್ವೇಷದ ಕಾರಣದಿಂದ ನಡೆದಿತ್ತು ಎನ್ನಲಾಗಿದ್ದು ಹಲ್ಲೆಯ ನಂತರ ಕೌಶಿಕ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು, ಆದರೆ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ ಅವರು ನಿಧನರಾದರು.

Leave a Reply

Your email address will not be published. Required fields are marked *

error: Content is protected !!