ಬಂಟ್ವಾಳ: ವ್ಯಕ್ತಿಯ ಮೇಲೆ ತಲವಾರು ದಾಳಿಗೆ ಯತ್ನ,ಪ್ರಕರಣ ದಾಖಲು
ಬಂಟ್ವಾಳ: ವ್ಯಕ್ತಿಯೊರ್ವರ ಮೇಲೆ ತಲ್ವಾರು ದಾಳಿಗೆ ಯತ್ನಿಸಿದ ಘಟನೆ ನಡೆದಿದ್ದು ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಜೀಪಮುನ್ನೂರು ಗ್ರಾಮದ ಉಮರ್ ಫಾರೂಕ್ (48), ಎಂಬವರು ಜೂ.11ರಂದು ಮುಂಜಾನೆ, ಮನೆಯಿಂದ ಜೀಪ್ ನಲ್ಲಿ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದು ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ, ಅವರು ತೆರಳುತ್ತಿದ್ದ ರಸ್ತೆಯಲ್ಲಿ ವಿರುದ್ದ ದಿಕ್ಕಿನಿಂದ ಇಬ್ಬರು ಅಪರಿಚಿತರು ಬೈಕ್ ನಲ್ಲಿ ಬಂದಿದ್ದು ಆ ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಕುಳಿತಿದ್ದ ವ್ಯಕ್ತಿಯು ತಲವಾರು ಬೀಸಿದ್ದಾನೆ. ಈ ವೇಳೆ ತಲವಾರು ತಾಗಿ ಉಮರ್ ಫಾರೂಕ್ ಅವರ ವಾಹನದ ಸೈಡ್ ಮಿರರ್ ಗಾಜು ಒಡೆದಿದೆ. ಘಟನೆಯ ಬಗ್ಗೆ ಉಮರ್ ಫಾರೂಕ್ ಅವರು ಜೂ.13ರಂದು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.